ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಟಿಆರ್‌ಎಸ್ ರಾಜ್ಯಸಭಾ ಸದಸ್ಯನ ಪುತ್ರ ಅರೆಸ್ಟ್

ಸೋಮವಾರ, 13 ಆಗಸ್ಟ್ 2018 (14:27 IST)
ಹೈದರಾಬಾದ್ : ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್)ಯ ರಾಜ್ಯಸಭಾ ಸದಸ್ಯ ಡಿ. ಶ್ರೀನಿವಾಸ್ ಅವರ ಪುತ್ರ ಡಿ. ಸಂಜಯ್ ಎಂಬಾತ  ತಾನು ನಡೆಸುವ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದ ಮೇಲೆ ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.


ನಿಝಾಮಾಬಾದ್‌ನ ಮಾಜಿ ಮೇಯರ್ ಆಗಿದ್ದ ಸಂಜಯ್ ಆಗಸ್ಟ್ 3ರಂದು ತನ್ನ ಮೇಲೆ  ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿವಾರ ಪೊಲೀಸರ ಮುಂದೆ ಶರಣಾಗಿದ್ದಾನೆ. ವಿಚಾರಣೆಗೆ ಗುರಿಪಡಿಸಿದ ಬಳಿಕ ಆತನನ್ನು ಅಧಿಕೃತವಾಗಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸ್ಥಳೀಯ ನ್ಯಾಯಾಲಯ ಆರೋಪಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಿದೆ.


ಇತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ, ಅಶ್ಲೀಲ ಭಾಷೆಯಲ್ಲಿ ನಿಂದಿಸುತ್ತಿದ್ದ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ. ಹಾಗೇ ತಮ್ಮ ಆರೋಪಕ್ಕೆ ಪುರಾವೆಯಾಗಿ ಸಂಜಯ್ ಕಳುಹಿಸಿದ ಎಸ್‌ಎಂಎಸ್ ಸಂದೇಶಗಳನ್ನೂ ಅವರು ನೀಡಿದ್ದಾರೆ.


ಆದರೆ ಈ ಆರೋಪವನ್ನು ನಿರಾಕರಿಸಿದ್ ಸಂಜಯ್, ಇದು ರಾಜಕೀಯಪ್ರೇರಿತ ಹಾಗೂ ನಮ್ಮ ಕುಟುಂಬವನ್ನು ಗುರಿ ಮಾಡಿ ಮಾಡುತ್ತಿರುವ ಸುಳ್ಳು ಆರೋಪ ಎಂದಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ