ಬಾಲಕಿಗೆ ಮದ್ಯ ಕುಡಿಸಿ 2 ವರ್ಷ ಅತ್ಯಾಚಾರಗೈದ ಐವರು ಕಾಮುಕರು

ಸೋಮವಾರ, 25 ಸೆಪ್ಟಂಬರ್ 2017 (20:25 IST)
ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಚೆರ್ತಾಲಾ ಬಳಿಯ ತುವರಾವೂರ್‌ನಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳಾದ ವಲಮಂಗಲಂ ಮೂಲದ 28 ವರ್ಷ ವಯಸ್ಸಿನ ರಾಜೇಶ್ ಪಟ್ಟಾನಕ್ಕಡ್ ಮೂಲದ ಬಿನಾ ಆಕಾ ಜಿನಾದೇವ್ ನಾಪತ್ತೆಯಾಗಿದ್ದರು. ಆದರೆ, ಪೊಲೀಸರು ಕೊನೆಗೂ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
  
ಪಟ್ಟಾನಕ್ಕಡ್‌ ಪಟ್ಟಣದ ಅಟೋ ಚಾಲಕ ಅಖಿಲ್ ಕೃಷ್ಣ 18 ತಿಂಗಳ ಹಿಂದೆ ಬಾಲಕಿಯೊಂದಿಗೆ ಸ್ನೇಹಗಳಿಸಿದ್ದ. ಆಕೆಯನ್ನು ನಿರ್ಜನ ಪ್ರದೇಶಗಳಿಗೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ಮದ್ಯ ಕುಡಿಸಿ ಅತ್ಯಾಚಾರವೆಸಗುತ್ತಿದ್ದ. ಕೆಲತಿಂಗಳುಗಳ ನಂತರ ಆಕೆಯನ್ನು ತನ್ನ ಗೆಳೆಯರಿಗೆ ಪರಿಚಯಿಸಿದ್ದ. ಸುಮಾರು ಒಂದು ವರ್ಷ ಕಾಲ ಎಲ್ಲರು ಸೇರಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಬಾಲಕಿಯ ದೇಹದಲ್ಲಾಗುತ್ತಿರುವ ಬದಲಾವಣೆಗಳನ್ನು ಗಮನಿಸಿದ ತಾಯಿ, ಆಕೆಯನ್ನು ವೈದ್ಯರ ಬಳಿ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾಳೆ. ಬಾಲಕಿ ಗರ್ಭವತಿಯಾಗಿರುವುದು ಆಸ್ಪತ್ರೆಯ ಸಿಬ್ಬಂದಿಗೆ ತಿಳಿದಿದೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 
 
ಪೊಲೀಸರು ಬಾಲಕಿಯ ವಿಚಾರಣೆ ನಡೆಸಿದಾಗ ಹಲವಾರು ಮಂದಿ ಅತ್ಯಾಚಾರವಸೆಗಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ಹೇಳಿಕೆಯ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ