ಮಥುರಾ ದೇವಾಲಯದಲ್ಲಿ ಜನದಟ್ಟಣೆಗೆ ಇಬ್ಬರು ಸಾವು

ಶನಿವಾರ, 20 ಆಗಸ್ಟ್ 2022 (13:10 IST)
ಲಕ್ನೋ : ಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆ ಉತ್ತರ ಪ್ರದೇಶದ ಮಥುರಾ ದೇವಾಲಯದಲ್ಲಿ ಶುಕ್ರವಾರ ಜನದಟ್ಟಣೆ ಉಂಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇವಾಲಯದಲ್ಲಿ ಭಕ್ತರ ಸಂಖ್ಯೆ ಹಠಾತ್ತನೆ ಏರಿಕೆಯಾಗಿ, ಆರತಿಯ ಸಮಯ ದೇವಾಲಯದ ಒಳಗೆ ಜನರು ನುಗ್ಗಲಾರಂಭಿಸಿದರು.

ಈ ವೇಳೆ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನೂ 6 ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಥುರಾದ ಹಿರಿಯ ಪೊಲೀಸ್ ಅಭಿಷೇಕ್ ಯಾದವ್ ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ