ದಕ್ಷಿಣ ಸುಡಾನ್`ನಲ್ಲಿ ಅಪಹರಣಗೊಂಡಿದ್ದ ಇಬ್ಬರು ಭಾರತೀಯರ ಬಿಡುಗಡೆ
ಸುಡಾನ್ ಬಂಡುಕೋರರಿಂದ ಅಪಹರಣಕ್ಕೊಳಗಾಗಿದ್ದ ಇಬ್ಬರು ಭಾರತೀಯ ಇಂಜಿನಿಯರ್`ಗಳನ್ನ ಬಿಡುಗಡೆಗೊಳಿಸಲಾಗಿದೆ. ಭಾರತ ಸರ್ಕಾರದ ಮಧ್ಯಪ್ರವೇಶದ ಬಳಿಕ ಭಾರತೀಯರನ್ನ ಬಿಡುಗಡೆಗೊಳಿಸಲಾಗಿದೆ.
ಈ ಬಗ್ಗೆ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯಿಸಿರುವ ಸುಷ್ಮಾ ಸ್ವರಾಜ್, ಭಾರತದ ಪ್ರಜೆಗಳಾದ ಮಿಥುನ್ ಮತ್ತು ಎಡ್ವರ್ಡ್ ಬಿಡುಗಡೆಯ ಸುದ್ದಿ ತಿಳಿಸಲು ನನಗೆ ಸಂತಸವಾಗುತ್ತಿದೆ. ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ ದಕ್ಷಿಣ ಸುಡಾನ್`ನ ಭಾರತದ ರಾಯಭಾರಿ ಶ್ರೀಕುಮಾರ್ ಮೆನನ್ ಅವರಿಗೆ ಸುಷ್ಮಾ ಅಭಿನಂದನೆ ಸಲ್ಲಿಸಿದ್ದಾರೆ.