40ನೇ ತುರ್ತುಪರಿಸ್ಥಿತಿ ವರ್ಷಾಚರಣೆ ಅಂಗವಾಗಿ ಭಾಷಣ ಮಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರು ಸರ್ವಾಧಿಕಾರಿ ಧೋರಣೆಯನ್ನು ನಿಲ್ಲಿಸದಿದ್ದಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಬಂಗಾಳದ ಅಘೋಷಿತ ತುರ್ತುಪರಿಸ್ಥಿತಿಯಿದೆ, ಹಿಂಸಾಚಾರವಿದೆ. ವಿಪಕ್ಷಗಳಿಗೆ ತಮ್ಮ ನಿಲುವುಗಳನ್ನು ಮಂಡಿಸಲು ಅವಕಾಶ ದೊರೆಯುತ್ತಿಲ್ಲ. ವಿಪಕ್ಷ ನಾಯಕರುಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಅಧಿಕಾರದ ನಶೆ ತಲೆಗೆ ಏರಿದ ನಾಯಕರು ನಾಶವಾಗುತ್ತಾರೆ ಎಂದು ಜಾವ್ಡೇಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.