ಇಲಿ ಕಚ್ಚಿ ಅಸ್ವಸ್ಥಗೊಂಡ ಯುಪಿ ಸಚಿವ !

ಮಂಗಳವಾರ, 3 ಮೇ 2022 (13:24 IST)
ಲಕ್ನೋ : ಉತ್ತರಪ್ರದೇಶದ ಬಾಂದಾ ಜಿಲ್ಲೆಗೆ ನಿನ್ನೆ ಭೇಟಿ ನೀಡಿದ್ದ ವೇಳೆ ಇಲ್ಲಿನ ಸರ್ಕೀಟ್ ಹೌಸ್ನಲ್ಲಿ ತಂಗಿದ್ದ ಸಚಿವರಿಗೆ ಇಲಿ ಕಚ್ಚಿದ್ದರಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ.

ಯುವಜನ ಅಭಿವೃದ್ಧಿ ಮತ್ತು ಕ್ರೀಡಾ ಸಚಿವ ಗಿರೀಶ್ಚಂದ್ರ ಯಾದವ್ ಅವರು ಬಾಂದಾ ಜಿಲ್ಲೆಗೆ ತೆರಳಿದ್ದರು. ರಾತ್ರಿ ಮಾವೈ ಬೈಪಾಸ್ನಲ್ಲಿರುವ ಒಂದು ಸರ್ಕಿಟ್ ಹೌಸ್ನಲ್ಲಿ ಉಳಿದುಕೊಂಡಿದ್ದರು. ರಾತ್ರಿ ಮಲಗಿದ್ದ ವೇಳೆ ಅವರಿಗೆ ಇಲಿಕಚ್ಚಿದೆ. ಸ್ವಲ್ಪ ಸಮಯ ಕಳೆದ ಬಳಿಕ ಅವರು ಕೊಂಚ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. 

ಇದು ಅಲ್ಲಿನ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ಕೆಲವೇ ಕ್ಷಣಗಳಲ್ಲಿ ಅವರನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ, ಡಿಸ್ಚಾರ್ಜ್ ಮಾಡಲಾಗಿದೆ. ಸಧ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.

ಸಚಿವರ ಬಲಗೈ ಬೆರಳಿಗೆ ಏನೋ ಕಚ್ಚಿರುವ ಗುರುತು ಪತ್ತೆಯಾಗಿದ್ದು, ಹಾವು, ಚೇಳು ಕಚ್ಚಿದೆ ಎಂದು ಗಾಬರಿಗೊಂಡಿದ್ದರು. ಸ್ಥಳ ಪರಿಶೀಲನೆ ಮಾಡಿದಾಗ ಇಲಿ ಇದ್ದಿದ್ದು ಕಂಡುಬಂದಿದೆ.

ಸೋಮವಾರ ಮುಂಜಾನೆ 3 ಗಂಟೆಯಲ್ಲಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಚಿಕಿತ್ಸೆ ನೀಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ.ಎಸ್.ಎನ್.ಮಿಶ್ರಾ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ