ಟ್ರಾಫಿಕ್ ರಾಮಸ್ವಾಮಿ ಎನ್ನುವವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಶಶಿಕಲಾ ಭೇಟಿಗೆ ತಮಿಳುನಾಡಿನಿಂದ ಜನ ಆಗಮಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇತರರ ಭೇಟಿಗೆ ಶಶಿಕಲಾ ಅವರಿಗೆ ಹೈಕೋರ್ಟ್ ನಿರ್ಭಂಧ ಹೇರಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಅಪರಾಧಿಯಾಗಿ ಜೈಲಿನಲ್ಲಿರುವ ಶಶಿಕಲಾರನ್ನು ತಮಿಳುನಾಡಿನ ಸಚಿವರು ಭೇಟಿ ಮಾಡುವುದು ಕಾನೂನುಬಾಹಿರ. ಕೂಡಲೇ ಅಂತಹ ಸಚಿವ, ಶಾಸಕರ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳುವಂತೆ ಆದೇಶ ನೀಡಬೇಕು ಎಂದು ರಾಮಸ್ವಾಮಿ ಅರ್ಜಿಯಲ್ಲಿ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.