ವಾಜಪೇಯಿ ಅನಾರೋಗ್ಯ ಹಿನ್ನಲೆ; ತಮ್ಮ ಹುಟ್ಟುಹಬ್ಬದ ಆಚರಣೆಯನ್ನು ಕ್ಯಾನ್ಸಲ್ ಮಾಡಿದ ದೆಹಲಿ ಸಿಎಂ

ಗುರುವಾರ, 16 ಆಗಸ್ಟ್ 2018 (14:11 IST)
ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜುಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ತಮ್ಮ ಹುಟ್ಟುಹಬ್ಬದ ಆಚರಣೆಯನ್ನು ಕ್ಯಾನ್ಸಲ್ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ 50 ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಆದರೆ ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜುಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಕಾರಣ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೆ ಇರಲು ಅವರು ನಿರ್ಧರಿಸಿದ್ದಾರೆ.


ಹಾಗೇ ಕೇಜ್ರಿವಾಲ್ ಅವರ ಮನೆ ಮುಂದೆ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ವೇಳೆ ಹುಟ್ಟುಹಬ್ಬವನ್ನು ಆಚರಿಸಬಾರದೆಂದು ಅವರು ಮನವಿ ಮಾಡಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಮಾಡಲಾಗುತ್ತಿರುವ ಖರ್ಚಿನ ಬದಲು ಆ ಹಣವನ್ನು ಕೇರಳ ಪ್ರವಾಹ ಪೀಡಿತರಿಗೆ ದಾನ ಮಾಡುವಂತೆ ಕೋರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ