ಕಾಡುಗಳ್ಳ ವೀರಪ್ಪನ್ ಪುತ್ರಿ ಬಿಜೆಪಿಗೆ ಸೇರ್ಪಡೆ

ಸೋಮವಾರ, 24 ಫೆಬ್ರವರಿ 2020 (06:39 IST)
ಚೆನ್ನೈ : ಕಾಡುಗಳ್ಳ ವೀರಪ್ಪನ್ ಹಿರಿಯ ಪುತ್ರಿ ವಕೀಲೆ ವಿದ್ಯಾರಾಣಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತಂದೆ ವೀರಪ್ಪನ್ ತಪ್ಪು ಮಾಡಿರಬಹುದು. ಆದರೆ ಅವರು ಯಾವಾಗಲೂ ಬಡವರಿಗಾಗಿ ಹೋರಾಡುತ್ತಿದ್ದರು. ಆದರೆ ಅವರು ಆಯ್ದುಕೊಂಡ ಮಾರ್ಗ ತಪ್ಪಾಗಿತ್ತು. ಈಗ ನಾನು ಸಮಾಜಸೇವೆ ಮಾಡುವ ಉದ್ದೇಶದಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ