ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್
ಇದಕ್ಕೂ ಮುನ್ನಾ ಬೆಂಗಳೂರು ಕಾಲ್ತುಳಿತ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಷ್ಟ್ರೀಯ ನಾಯಕತ್ವವನ್ನು ಭೇಟಿ ಮಾಡಿ ವಿವರಿಸಿದರು.
ಈ ಭೇಟಿ ವೇಳೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಮತ್ತು ದುರಂತ ಕಾಲ್ತುಳಿತ ಘಟನೆ ಸೇರಿದಂತೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ವಿವರಿಸಿದರು.
ಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಅಧ್ಯಕ್ಷರು ಘಟನೆಯ ಬಗ್ಗೆ ಮತ್ತು ಘಟನೆಯ ನಂತರ ಕರ್ನಾಟಕ ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಹೈಕಮಾಂಡ್ ಗೆ ವಿವರಿಸಿದರು ಎಂದು ವೇಣುಗೋಪಾಲ್ ಹೇಳಿದರು.