ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರೊಬ್ಬರೊಂದಿಗೆ ಸೀಟು ವಿನಿಮಯ ಮಾಡಿಕೊಳ್ಳಲು ನಿರಾಕರಿಸಿದ ಆರೋಪದ ಮೇಲೆ ಪ್ರಯಾಣಿಕರೊಬ್ಬರ ಮೇಲೆ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಜೂನ್ 19 ರ ಸಂಜೆ ನವದೆಹಲಿ-ಭೋಪಾಲ್ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಈ ಘಟನೆ ನಡೆದಿದೆ. ಝಾನ್ಸಿಯ ಬಬಿನಾದಿಂದ ಬಿಜೆಪಿ ಶಾಸಕ ರಾಜೀವ್ ಸಿಂಗ್ ಅವರು ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.
ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅವರು ಅವನ ಕೆನ್ನೆಗೆ, ಮುಖಕ್ಕೆ ಚಪ್ಪಲಿಯಿಂದ ಹೊಡೆಯುತ್ತಿರುವುದನ್ನು ಕಾಣಬಹುದು.
ಆತನ ಮೂಗಿನಿಂದ ರಕ್ತ ಸೋರುತ್ತಿದ್ದು, ಶರ್ಟ್ ರಕ್ತದಲ್ಲಿ ತೊಯ್ದಿರುವುದನ್ನು ತೋರಿಸುವ ಮತ್ತೊಂದು ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ.
ಎನ್ಡಿಟಿವಿ ಪ್ರಕಾರ, ಸಿಂಗ್ಗೆ ರೈಲು ಕಂಪಾರ್ಟ್ಮೆಂಟ್ನ ಹಿಂಭಾಗದಲ್ಲಿ ಆಸನ ಸಿಕ್ಕಿತು, ಅವರ ಪತ್ನಿ ಮತ್ತು ಮಗ ಮುಂಭಾಗದಲ್ಲಿ ಕುಳಿತಿದ್ದರು. ಹಲ್ಲೆಗೊಳಗಾದ ಪ್ರಯಾಣಿಕರು ಅವರ ಪಕ್ಕದಲ್ಲಿ ಕುಳಿತಿದ್ದರು ಮತ್ತು ಸಿಂಗ್ ಅವರೊಂದಿಗೆ ತಮ್ಮ ಆಸನವನ್ನು ಬದಲಾಯಿಸಲು ನಿರಾಕರಿಸಿದರು.
ನಂತರ, ಬಿಜೆಪಿ ಶಾಸಕರೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾದ ಕೆಲವರು ಝಾನ್ಸಿ ನಿಲ್ದಾಣದಲ್ಲಿ ರೈಲು ಹತ್ತಿ ಭೋಪಾಲ್ಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.
A BJP MLA on Vande Bharat requested a window seat from a co-passenger, who refused.
The MLA made a call, and at the next station, men boarded the train and assaulted the passenger.