ಮಾಟಗಾರ್ತಿ ಎಂದು ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಗ್ರಾಮಸ್ಥರು

ಬುಧವಾರ, 6 ಫೆಬ್ರವರಿ 2019 (06:35 IST)
ಜಾರ್ಖಂಡ್ : ಮಾಟಗಾರ್ತಿ ಎಂದು 50 ವರ್ಷದ ಮಹಿಳೆಯೊಬ್ಬಳನ್ನು ಗ್ರಾಮಸ್ಥರು ಬೆತ್ತಲೆ ಮಾಡಿ ಮೆರವಣಿಗೆ ಮಾಡಿಸಿದ ಅಮಾನವೀಯ ಘಟನೆ ಜಾರ್ಖಂಡ್‍ ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.


ಸಂತ್ರಸ್ತ ಮಹಿಳೆಯ ಪತಿಯ ತಮ್ಮ ಸೋನಲಾಲ್ ಕಿಶ್ಕು ಎನ್ನುವವರು ಭಾನುವಾರ ಬೆಳಗ್ಗೆ ರಾಜಕೀಯದ ರ್ಯಾಲಿ ಮುಗಿಸಿ ಹಿಂದಿರುಗುವಾಗ ಬಸ್ಸಿನಲ್ಲಿ ಕುಳಿತಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ಸೋನಲಾಲ್ ಕಾಯಿಲೆಯಿಂದ ಮೃತಪಟ್ಟಿದ್ದನು. ಆದರೆ ಆತನ ಹಿರಿಯ ಸಹೋದರನ ಪತ್ನಿ ಮಾಡಿದ ಮಾಟಮಂತ್ರದಿಂದ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿ ಆಕೆಯ ಮಗಳು ಹಾಗೂ ಸೊಸೆಯ ಮೇಲೆ ಹಲ್ಲೆ ಮಾಡಿದ್ದಾರೆ.


ಬಳಿಕ ಗ್ರಾಮಸ್ಥರು ಮಹಿಳೆಯನ್ನು ಬೆತ್ತಲೆಗೊಳಿಸಿ ಊರು ತುಂಬಾ ಮೆರವಣಿಗೆ ಮಾಡಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ರಕ್ಷಿಸಿದ್ದಾರೆ. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ