ವ್ಯಾಪಂ ಹಗರಣದ ಬಗ್ಗೆ ನ್ಯಾಯಾಲಯಗಳು ಮಾತ್ರ ಸಿಬಿಐ ತನಿಖೆ ನಡೆಸಲು ಆದೇಶಿಸಬಹುದು ಎನ್ನುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಹೇಳಿಕೆಯನ್ನು ಬೆಂಬಲಿಸಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮಧ್ಯಪ್ರದೇಶದ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.