ರೈತರ ಸಾಲ ಮನ್ನಾ ಮಾಡಿ: ಕೇಂದ್ರ ಸರಕಾರಕ್ಕೆ ಹಾರ್ದಿಕ್ ಪಟೇಲ್ ಒತ್ತಾಯ

ಶನಿವಾರ, 3 ಅಕ್ಟೋಬರ್ 2015 (14:53 IST)
ರೈತರು ಬರಗಾಲದಿಂದಾಗಿ ಸಾಲ ಭಾಧೆಯಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದು, ರೈತರ ಆತ್ಮಹತ್ಯೆಯನ್ನು ತಡೆಯಲು ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಬೇಕು ಎಂದು ಅಖಿಲ್ ಭಾರತೀಯ ಪಟೇಲ್ ನವನಿರ್ಮಾಣ ಸೇನೆಯ ಮುಖ್ಯಸ್ಥ ಹಾರ್ದಿಕ್ ಪಟೇಲ್ ಒತ್ತಾಯಿಸಿದ್ದಾರೆ.
 
ದೇಶದ ರೈತರು ಬರಗಾಲದಿಂದಾಗಿ ತತ್ತರಿಸಿದ್ದು ಸಾಲದ ಕಾಟ ತಾಳದೆ ಆತ್ಮಹತ್ಯೆಗೆ ಮೊರೆಹೋಗುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಲಾಲ್ ಬಹದ್ದೂ6ರ್ ಶಾಸ್ತ್ರಿ ಜನ್ಮದಿನಾಚರಣೆ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾರ್ದಿಕ್ ಹೇಳಿದ್ದಾರೆ.
 
ದೇಶದಲ್ಲಿರುವ ಎಲ್ಲಾ ರೈತರು ಒಂದಾಗಿ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು. ಕೇಂದ್ರ ಸರಕಾರ ಸ್ಪಂದಿಸದಿದ್ದಲ್ಲಿ ಉಗ್ರ ಹೋರಾಟಕ್ಕೆ ಸಿದ್ದರಾಗಬೇಕು ಎಂದು ಕರೆ ನೀಡಿದರು. 
 
ರೈತರು ತಾವು ಆತ್ಮಹತ್ಯೆಗೆ ಶರಣಾಗುವುದಿಲ್ಲ ಎನ್ನುವ ಪ್ರಮಾಣ ಮಾಡಿಕೊಂಡು ತಮ್ಮ ಹಕ್ಕಿಗಾಗಿ ಹೋರಾಟ ನಡೆಸಲು ರೈತ ಸಮೂಹ ಒಂದಾಗುವುದು ಅನಿವಾರ್ಯವಾಗಿದೆ ಎಂದು ಹಾರ್ದಿಕ್ ಪಟೇಲ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ