ಉತ್ತರಪ್ರದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಒಂದು ವೇಳೆ ಯೋಗಿ ಆದಿತ್ಯನಾಥ್ ತಾವು ಮಾಡುವುದೆಲ್ಲ ಸರಿ. ತಮಗೆ ಎಲ್ಲಾ ಗೊತ್ತಿದೆ ಎಂದು ಭಾವಿಸಿದಲ್ಲಿ ಅದು ತಪ್ಪು. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಡುತ್ತಾ ಸಾಗಿದೆ. ದಲಿತರು ಮತ್ತು ಅಲ್ಪಸಂಖ್ಯಾತ ಅಭಿವೃದ್ಧಿಯ ಬಗ್ಗೆ ಸರಕಾರ ತುಂಬಾ ಉದಾಸೀನತೆ ತೋರಿದೆ ಎಂದು ಕಿಡಿಕಾರಿದ್ದಾರೆ.
ಖರ್ಗೆಯವರಂತೆ ಅಸಮಾಧಾನ ವ್ಯಕ್ತಪಡಿಸಿದ ಮತ್ತೊಬ್ಬ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳು ಮತ್ತು ಲೈಂಗಿಕ ಕಿರುಕುಳಗಳು ನಡೆದಿರಲಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ತಿರುಗೇಟು ನೀಡಿದ್ದಾರೆ.