ರಜನಿಕಾಂತ್ ರಾಜಕೀಯಕ್ಕೆ ಬರುವುದಾದರೆ ಸ್ವಾಗತ: ವೆಂಕಯ್ಯನಾಯ್ಡು

ಭಾನುವಾರ, 21 ಮೇ 2017 (13:47 IST)
ರಜನಿಕಾಂತ್ ರಾಜಕೀಯಕ್ಕೆ ಬರುವುದಾದರೆ ಸ್ವಾಗತ. ಅವರೊಬ್ಬ ಶ್ರೇಷ್ಠ ನಟ ಎಂದು ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯನಾಯ್ಡು ಹೇಳಿದ್ದಾರೆ.
 
ರಜನಿಕಾಂತ್ ರಾಜಕೀಯ ಬರುವುದಾದಲ್ಲಿ ಸ್ವಾಗತಿಸುತ್ತೇವೆ. ತಮಿಳುನಾಡಿನಲ್ಲಿ ಸ್ಥಿರ ಸರಕಾರ ರಚನೆಯಾಗಲಿ ಎನ್ನುವುದೇ ನಮ್ಮ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ.
 
ಸೂಪರ್ ಸ್ಟಾರ್ ರಜನಿಕಾಂತ್ ಶೀಘ್ರದಲ್ಲಿ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ವರದಿಗಳು ತಮಿಳುನಾಡಿನಾದ್ಯಂತ ಹೊಸ ಸಂಚಲನ ಮೂಡಿಸಿವೆ. 
 
ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಬಣದ ಮತ್ತೊಬ್ಬ ನಾಯಕ ಮಾಜಿ ಸಿಎಂ ಪನ್ನೀರ್ ಸೆಲ್ವಂ ನಡುವೆ ನಡೆಯುತ್ತಿರುವ ತಿಕ್ಕಾಟ ಜನತೆಗೆ ಬೇಸರ ತಂದಿದೆ ಎಂದು ರಜನಿಕಾಂತ್ ಈಗಾಗಲೇ ಹೇಳಿಕೆ ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ