ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶೆಹನ್ಶಾರಿದ್ದಂತೆ ಎಂದು ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಹಲವು ಕುಟುಕು ಕಾರ್ಯಾಚರಣೆಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರು ಹಣ ಪಡೆದಿರುವ ಕೃತ್ಯಗಳು ಬಹಿರಂಗವಾಗಿವೆ. ಕಾಂಗ್ರೆಸ್-ಎಡಪಕ್ಷಗಳ ಮೈತ್ರಿ ಬಂಗಾಳದ ಗೌರವ ಮತ್ತು ಅಭಿಮಾನಕ್ಕೆ ಧಕ್ಕೆ ತಂದಿದೆ ಎಂದು ಟೀಕಿಸಿದ್ದಾರೆ.
ಮಮತಾ ಬ್ಯಾನರ್ಜಿ ವಿಪಕ್ಷದಲ್ಲಿದ್ದಾಗ ನ್ಯಾಯಕ್ಕಾಗಿ ಬೀದಿ ಬೀದಿಗಳಲ್ಲಿ ಹೋರಾಟ ನಡೆಸುತ್ತಿದ್ದರು.ಆದರೆ, ಮುಖ್ಯಮಂತ್ರಿಯಾದ ನಂತರ ಯಾರನ್ನು ಲಕ್ಷಕ್ಕೆ ತೆಗೆದುಕೊಳ್ಳದೆ ಶೆಹನ್ಶಾ ರಂತೆ ವರ್ತಿಸುವುದು ಪ್ರಜಾಪ್ರಭುತ್ವದಲ್ಲಿ ಮಾರಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.