ಮದುವೆಗೆ ನಿರಾಕರಿಸಿದ ಯುವತಿಗೆ ಆತ ಮಾಡಿದ್ದೇನು?

ಶುಕ್ರವಾರ, 4 ಡಿಸೆಂಬರ್ 2020 (08:50 IST)
ವೈಜಾಗ್ : ವ್ಯಕ್ತಿಯೊಬ್ಬ ಮದುವೆಯಾಗಲು ನಿರಾಕರಿಸಿದ 20 ವರ್ಷದ ಯುವತಿಯ  ಗಂಟಲು ಸೀಳಿದ ಘಟನೆ ವಿಶಾಖಪಟ್ಟಣಂನ ಒನ್ ಟೌನ್ ಪ್ರದೇಶದಲ್ಲಿ ನಡೆದಿದೆ.

ಶ್ರೀಕಾಂತ್ ಆರೋಪಿ, ಪ್ರಿಯಾಂಕಾ ಸಂತ್ರಸ್ತೆ. ಇವರಿಬ್ಬರು ನೆರೆಹೊರೆಯರಾಗಿದ್ದು, ಆರೋಪಿ ಸಂತ್ರಸ್ತೆಗೆ ಮದುವೆ ಪ್ರಪೋಸ್ ಮಾಡಿದ್ದಾನೆ. ಆದರೆ ಯುವತಿ ಅದನ್ನು ನಿರಾಕರಿಸಿ ಮನೆಯವರು ತೋರಿಸಿದ ಹುಡುಗನನ್ನು ಮದುವೆಯಾಗುವುದಾಗಿ ತಿಳಿಸಿದ್ದಾಳೆ. ಇದರಿಂದ ಕೋಪಗೊಂಡ ಆತ ಆಕೆಯ ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾನೆ.

ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವಳ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಹಾಗೇ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ