ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಸೋಮವಾರ, 24 ಆಗಸ್ಟ್ 2020 (10:01 IST)
ನವದೆಹಲಿ : ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನೂತನ ಅಧ್ಯಕ್ಷರ ಹೆಸರಿನ ಪಟ್ಟಿಯಲ್ಲಿ  ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಸಿಂಧೆ, ಅಶೋಕ್ ಗೆಹ್ಲೋಟ್ ಮುಂತಾದವರ ಹೆಸರು ಕೇಳಿಬಂದಿದೆ ಎನ್ನಲಾಗಿದೆ.

ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಶತಮಾನದಿಂದ ನೆಹರೂ-ಗಾಂಧಿ ಕುಟುಂಬ ಮಾಡಿದ ತ್ಯಾಗ ಹಾಗೂ ಕೊಡುಗೆಗಳನ್ನು ಪಕ್ಷವೂ ಮರೆಯಬಾರದು. ಅವರು ಭಾರತದ ಕಲ್ಪನೆಗಾಗಿ ಬಂಡೆಯಂತೆ ನಿಂತಿದ್ದಾರೆ. 200ರಲ್ಲಿ ಮತ್ತು 2009ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸೋನಿಯಾ ಮಾಡಿರುವ ಶ್ರಮ ಮರೆಯಬಾರದು.

ಸದ್ಯದ ಬಿಕ್ಕಟ್ಟಿನ ಸಮಯದಲ್ಲಿ ಎಲ್ಲಾ ನಾಯಕರು, ಕಾರ್ಯಕರ್ತರು, ಸೋನಿಯಾ ಗಾಂಧಿಯವರ ಪರ ನಿಂತು ಪಕ್ಷವನ್ನು ಬಲಪಡಿಸಬೇಕು. ಅವರಿಗೆ ಅಧ್ಯಕ್ಷರಾಗಿ ಮುಂದುವರಿಯಲು ಇಷ್ಟವಿಲ್ಲದಿದ್ದರೆ ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಮನವಿ ಮಾಡುವುದರ ಮೂಲಕ ಸೋನಿಯಾ ಗಾಂಧಿ ಪರ ಬ್ಯಾಟ್ ಬೀಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ