ಪತ್ನಿಯನ್ನು ಥಳಿಸಿದ ಪತಿ ಕೊನೆಗೆ ಮಾಡಿದ್ದೇನು?

ಮಂಗಳವಾರ, 1 ಡಿಸೆಂಬರ್ 2020 (08:47 IST)
ಬಿಜ್ನೋರ್ : ತನ್ನ ಮೇಲೆ ಪತ್ನಿ ದೂರು ದಾಖಲಿಸಿದ ಹಿನ್ನಲೆಯಲ್ಲಿ 28 ವರ್ಷದ ಯುವಕನೊಬ್ಬ ಮರಕ್ಕೆ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.

ನರೇಂದ್ರ ಕುಮಾರ್ ಮೃತಪಟ್ಟ ವ್ಯಕ್ತಿ. ಕುಮಾರ್ ಮತ್ತು ಪತ್ನಿಯ ನಡುವೆ ವಾಗ್ವಾದ ನಡೆದಿದ್ದು, ಇದರಿಂದ ಕೋಪಗೊಂಡ ಕುಮಾರ್ ಪತ್ನಿಯನ್ನು ಥಳಿಸಿದ್ದಾನೆ. ಇದರಿಂದ ಗಾಯಗೊಂಡ ಪತ್ನಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಘಟನೆಯ ಬಗ್ಗೆ ಪತ್ನಿಯ ಹೇಳಿಕೆಯ ಮೇರೆಗೆ ಪೊಲೀಸರು ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಚಾರ ತಿಳಿದ ಕುಮಾರ್ ಮನನೊಂದು ಮನೆಯಿಂದ ಹೊರಗೆ ಹೋಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ