ಸಹೋದರಿಯ ಜೊತೆ ಪ್ರೇಮಸಂಬಂಧ ಹೊಂದಿದ್ದಾನೆಂದು ಶಂಕಿಸಿ ಯುವಕನಿಗೆ ಹೀಗಾ ಮಾಡೋದು?

ಸೋಮವಾರ, 16 ನವೆಂಬರ್ 2020 (06:54 IST)
ಪಟಿಯಾಲ : ಸಹೋದರಿಯ ಜೊತೆ ಪ್ರೇಮಸಂಬಂಧ ಹೊಂದಿದ್ದಾನೆಂದು ಶಂಕಿಸಿ 22 ವರ್ಷದ ಯುವಕನನ್ನು ನೆರೆಮನೆಯಾತ ಕೊಲೆ ಮಾಡಿದ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.

ಮೃತ ಯುವಕ ಅಲಂಕಾರಿಕ ವಸ್ತುಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋಗುತ್ತಿದ್ದಾಗ ದಾರಿಗೆ ಅಡ್ಡಬಂದ ನೆರೆಮನೆಯಾತ ಹರಿತವಾದ ಆಯುಧದಿಂದ ಯುವಕನಿಗೆ ಹಲವು ಬಾರಿ ಇರಿದಿದ್ದಾನೆ. ಯುವಕನನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆತ ಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಮೃತ ಯುವಕನ ತಂದೆ ಸದರ್ ನಭಾ ಪೊಲೀಸರಿಗೆ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ