ಬೈಕ್ ಸ್ಟಂಟ್ ಮಾಡಬೇಡಿ ಎಂದ ವ್ಯಕ್ತಿಗೆ ಮೂವರು ಅಪ್ರಾಪ್ತರು ಸೇರಿ ಮಾಡಿದ್ದೇನು ಗೊತ್ತಾ?

ಮಂಗಳವಾರ, 14 ಜುಲೈ 2020 (10:11 IST)
Normal 0 false false false EN-US X-NONE X-NONE

ನವದೆಹಲಿ : ಬೈಕ್ ಸ್ಟಂಟ್ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಮೂವರು ಅಪ್ರಾಪ್ತ ಬಾಲಕರು ಸೇರಿ ನಡುರಸ್ತೆಯಲ್ಲಿ  ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ದೆಹಲಿಯ ರಘಬೀರ್ ನಗರದಲ್ಲಿ ನಡೆದಿದೆ.

ಮನೀಶ್ ಜಗ್ಗಿ (25) ಕೊಲೆಯಾದ ವ್ಯಕ್ತಿ. ಮನೀಶ್ ವಾಸವಿದ್ದ ಏರಿಯಾದ ರಸ್ತೆಯಲ್ಲಿ ಮೂವರು ಅಪ್ರಾಪ್ತ ಬಾಲಕರು ಬೈಕ್ ಸ್ಟಂಟ್ ಮಾಡುತ್ತಿದ್ದರು. ಇದಕ್ಕೆ ಮನೀಶ್ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಅವರ ನಡುವೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ಹೋಗಿ ಮೂವರು ಸೇರಿ ಚಾಕುವಿನಿಂದ ಮನೀಶ್ ನನ್ನು 28 ಬಾರಿ ಇರಿದು ಕೊಲೆ ಮಾಡಿದ್ದಾರೆ. ಆ ವೇಳೆ ರಸ್ತೆಯಲ್ಲಿ ಜನರ ತಿರುಗಾಡುತ್ತಿದ್ದರು ಯಾರೂ ಈ ದುರ್ಘಟನೆಯನ್ನು ತಡೆಯಲಿಲ್ಲ ಎನ್ನಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಆತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ