ಕಾವೇರಿ ನೀರು ಹಂಚಿಕೆ ಕುರಿತು ನಿತಿನ್ ಗಡ್ಕರಿಗೆ ದೇವೇಗೌಡರು ನೀಡಿದ ಸಲಹೆ ಏನು…?

ಶುಕ್ರವಾರ, 9 ಮಾರ್ಚ್ 2018 (08:09 IST)
ನವದೆಹಲಿ : ಮಾಜಿ ಪ್ರಧಾನಿ ದೇವೆಗೌಡ ಅವರು ಕಾವೇರಿ ನದಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸಲಹೆ ಒಂದನ್ನು ನೀಡಿದ್ದಾರೆ.


ಗುರುವಾರ ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ದೇವೆಗೌಡರು, ‘ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ರಾಜ್ಯ ಸಂತಸ ಪಡುವಂತದ್ದು ಏನೂ ಇಲ್ಲ. ರಾಜ್ಯದ ಅನೇಕ ಬೇಡಿಕೆಗಳನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿಲ್ಲ. ನ್ಯಾಯಾಧೀಕರಣದ ತೀರ್ಪನ್ನೇ ಎತ್ತಿ ಹಿಡಿದಿದೆ. ರಾಜ್ಯಕ್ಕೆ ಭಾರೀ ಅನ್ಯಾಯವಾಗಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ಸಮಸ್ಯೆ ಉಂಟಾಗಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನೀವೇ ಮರು ಪರಶೀಲನಾ ಅರ್ಜಿ ಸಲ್ಲಿಸಿ’ ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ