ಲೋಕಪಾಲ ಚಳವಳಿಯ ಸಂದರ್ಭದಲ್ಲಿ ಬಿಜೆಪಿ ಪರ ಮೃದು ಧೋರಣೆ ಹೊಂದಿದ್ದರು ಎಂಬ ಆಮ್ ಆದ್ಮಿ ಪಕ್ಷದ ಹೇಳಿಕೆಗೆ ತಿರುಗೇಟು ನೀಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ, ಹಾಗಿದ್ದಲ್ಲಿ ಆಪ್ ಪಕ್ಷದ ಸಿಎಂ ಅಭ್ಯರ್ಥಿಯಾಗುವಂತೆ ಕೇಜ್ರಿವಾಲ್ ಯಾಕೆ ನನಗೆ ಕೋರಿದ್ದರು ಎಂದು ಗುಡುಗಿದ್ದಾರೆ.