ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಕೇಸ್ ದಾಖಲಿಸಿದ್ದೇಕೆ?

ಶುಕ್ರವಾರ, 24 ಜನವರಿ 2020 (10:26 IST)
ತಿರುವನಂತಪುರಂ : ಧರ್ಮ, ಜನಾಂಗಗಳ ನಡುವೆ ದ್ವೇಷದ ಬೀಜ ಬಿತ್ತುವಂತಹ ಹೇಳಿಕೆ ನೀಡಿದ್ದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಕೇರಳ ದೇಶದ ಮತ್ತೊಂದು ಕಾಶ್ಮೀರ ಆಗಲು ಹೊರಟಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದ ಮಲಪ್ಪುರಂನ  ಕುಟ್ಟಿಪುರಂ ಪಂಚಾಯತ್ ಹಿಂದೂಗಳಿಗೆ ನೀರು ಸರಬರಾಜು ನಿರಾಕರಿಸಿದೆ. ಈ ಪ್ರದೇಶದಲ್ಲಿ ಸೇವಾ ಭಾರತಿ ನೀರು ಸರಬರಾಜು ಮಾಡುತ್ತಿದೆ  ಎಂದು ಟ್ವಿಟ್ ಮಾಡಿದ್ದರು.

 

ಈ ಟ್ವೀಟ್  ಧರ್ಮ, ಜನಾಂಗಗಳ ನಡುವೆ ದ್ವೇಷಕ್ಕೆ ಕಾರಣವಾಗುವಂತಹ ಹಿನ್ನಲೆಯಲ್ಲಿ ಕೇರಳ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ಐಪಿಸಿ ಸೆಕ್ಷನ್ 153 ಎ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ