ಯೋಗಿ ಅಯೋಧ್ಯೆಯಲ್ಲಿ ಯಾಕೆ ಸ್ಪರ್ಧಿಸುತ್ತಿಲ್ಲ!?

ಶನಿವಾರ, 15 ಜನವರಿ 2022 (13:14 IST)
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹುದೊಡ್ಡ ಕುತೂಹಲ ಸೃಷ್ಟಿಸಿದ ವಿಚಾರವಾಗಿತ್ತು.
 
ಈ ಬಾರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸಲಿದ್ದಾರೆ ಎಂದು ಬಲವಾದ ಮೂಲಗಳಿಂದ ತಿಳಿದುಬಂದ ಮಾಹಿತಿ ಎಂದೇ ಹೇಳಲಾಗಿತ್ತು. ಆದರೆ ಕುತೂಹಲಕ್ಕೀಗ ತೆರೆಬಿದ್ದಿದೆ. ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸುತ್ತಿಲ್ಲ.

ಬದಲಿಗೆ ಅವರು ಗೋರಖ್ಪುರ ನಗರ ವಿಧಾನಸಭೆ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂಬುದು ಪಕ್ಕಾ ಆಗಿದೆ. ಈ ಗೋರಖ್ಪುರ ಯೋಗಿ ಆದಿತ್ಯನಾಥ್ರ ಸ್ವಕ್ಷೇತ್ರ.

ಗೋರಖ್ಪುರ ತೊರೆದು ಅಯೋಧ್ಯೆಯಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಬಿಜೆಪಿಯ ಉತ್ತರಪ್ರದೇಶ ಉಸ್ತುವಾರಿ, ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ಇದನ್ನು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ