ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಬಗ್ಗೆ ಲೇವಡಿ ಮಾಡಿದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದಲ್ಲಿ ಪ್ರಧಾನಿ ಹುದ್ದೆಗೆ ಮೋದಿ ರಾಜೀನಾಮೆ ನೀಡಲಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಕಳೆದ 25 ವರ್ಷಗಳಿಂದ ಬಡಾ ಭಾಯಿ(ಲಾಲು ಯಾದವ್) ಮತ್ತು ಛೋಟಾ ಭಾಯಿ(ನಿತೀಶ್ ಕುಮಾರ್) ಸರಕಾರ ನಡೆಸುತ್ತಿದ್ದಾರೆ. ಆದರೆ, ಬಿಹಾರ್ ರಾಜ್ಯದ ಅಭಿವೃದ್ಧಿಯ ಬಗ್ಗೆ ಅವರು ಯಾವತ್ತೂ ಯೋಚಿಸುವುದಿಲ್ಲ ಎಂದು ಮೋದಿ ಚುನಾವಣೆ ಪ್ರಚಾರದಲ್ಲಿ ವಾಗ್ದಾಳಿ ನಡೆಸಿದ್ದಾರೆ.