ಗುರು ಮಹೋತ್ಸವ ಸಮಾರಂಭ: ಮಹಿಳೆಯರಿಂದ ಪಾದ ತೊಳೆಸಿಕೊಂಡ ಜಾರ್ಖಂಡ್ ಸಿಎಂ

ಭಾನುವಾರ, 9 ಜುಲೈ 2017 (16:10 IST)
ಜೆಮ್‌ಶ್ಷೆಡ್‌ಪುರ: ಜಾರ್ಖಂಡ್‌ ಮುಖ್ಯಮಂತ್ರಿ ರಘುವರ್‌ ದಾಸ್‌ ಅವರ ಪಾದಗಳನ್ನು ಮಹಿಳೆಯರು ತೊಳೆದಿರುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
 
ಜೆಮ್‌ಶ್ಷೆಡ್‌ಪುರದ ಬ್ರಹ್ಮ ಲೋಕ ಧಾಮದಲ್ಲಿ ನಡೆಯುತ್ತಿರುವ ‘ಗುರು ಮಹೋತ್ಸವ’ ಸಮಾರಂಭದಲ್ಲಿ ಇಬ್ಬರು ಮಹಿಳೆಯರು ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ತೊಳೆದಿದ್ದಾರೆ. ಈ ವೀಡಿಯೊ ಎಲ್ಲೆಡೆ ಹರಿದಾಡುತ್ತಿದ್ದು ಭಾರೀ ಸುದ್ದಿ ಮಾಡುತ್ತಿದೆ.
 
ಭದ್ರತಾ ಸಿಬ್ಬಂದಿಯೊಟ್ಟಿಗೆ ಬಂದ ರಘುವರ್‌ ದಾಸ್‌ ಅವರನ್ನು ದೊಡ್ಡ ತಟ್ಟೆಯೊಂದರಲ್ಲಿ ನಿಲ್ಲಿಸಿ ಹೂವಿನ ಎಸಳುಗಳಿರುವ ನೀರನ್ನು ಇಬ್ಬರು ಮಹಿಳೆಯರು ಬಿಂದಿಗೆಯಿಂದ ಅವರ  ಪಾದಕ್ಕೆ ಹಾಕಿ ತೊಳೆಯುತ್ತಾರೆ. ಬಳಿಕ, ಮಹಿಳೆಯರು ಮೇಲೆದ್ದು ಹಿಂದಕ್ಕೆ ಸರಿಯುತ್ತಿದ್ದಂತೆ ಜನರಿಗೆ ಕೈ ಮುಗಿಯುತ್ತಲೇ ರಘುವರ್‌ ದಾಸ್‌ ಮುಂದೆ ಹೋಗುವ ದೃಶ್ಯಗಳು ವಿಡಿಯೊದಲ್ಲಿದೆ.
 

ವೆಬ್ದುನಿಯಾವನ್ನು ಓದಿ