ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿತೀಶ್ ಕುಮಾರ್ ನಿರ್ಧಾರ

ಸೋಮವಾರ, 3 ಆಗಸ್ಟ್ 2015 (19:06 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾಗಿ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
 
ಜನತಾ ಪರಿವಾರದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾದ  ನಿತೀಶ್ ಕುಮಾರ್, ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯಾದ್ಯಂತ ಚುನಾವಣೆ ಪ್ರಚಾರ ಮಾಡಿ ಪಕ್ಷಕ್ಕೆ ಬಹುಮತ ಕೊಡಿಸುವುದೇ ನನ್ನ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
 
ಜೆಡಿಯು ಪಕ್ಷದ ಚುನಾವಣೆ ಪ್ರಚಾರದ ನೇತೃತ್ವ ವಹಿಸುತ್ತೇನೆ ಎಂದು ಸುದ್ದಿಗಾರರಿಗೆ ನಿತೀಶ್ ಹೇಳಿದ್ದಾರೆ
 
ಬಿಹಾರ್ ರಾಜ್ಯದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಬಲಾಬಲವನ್ನು ಜನತೆಯ ಮುಂದಿಡಲಿವೆ.
 
ಬಿಜೆಪಿ ಪಕ್ಷ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದೆ. ಕಾಂಗ್ರೆಸ್, ಆರ್‌ಜೆಡಿ, ಜೆಡಿಯು ಪಕ್ಷಗಳು ಮೈತ್ರಿ ರಚಿಸಿಕೊಂಡು ಬಿಹಾರ್ ಸಿಎಂ ನಿತೀಶ್ ಕುಮಾರ್‌ರನ್ನು ಸಿಎಂ ಅಭ್ಯರ್ಥಿಯಾಗಿ ಬಿಂಬಿಸಿವೆ.
 

ವೆಬ್ದುನಿಯಾವನ್ನು ಓದಿ