ಮುಂಬೈ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಮೆಮನ್ಗೆ ರಾಜಕೀಯ ಬೆಂಬಲವಿಲ್ಲವಾದ್ದರಿಂದ ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಹೇಳಿದ್ದಾರೆ.
1993ರಲ್ಲಿ ನಡೆದ ಮುಂಬೈ ಸ್ಫೋಟದಲ್ಲಿ ಸುಮಾರು 900 ಮುಸ್ಲಿಮರು, ಹಿಂದುಗಳು ಜೀವವನ್ನು ಕಳೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೇವಲ ಮೂವರನ್ನು ಅರೋಪಿಗಳಾಗಿ ಘೋಷಿಸಲಾಗಿದೆ.ಹೀಗಾದಲ್ಲಿ ಯಾವ ರೀತಿ ನ್ಯಾಯ ದೊರೆಯಲು ಸಾಧ್ಯ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.