ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಹೊಸಪೀಳಿಗೆಗೆ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುವಂತೆ ಹೇಳುವ ಕಾಲ ಬಂದಿದೆ ಎಂದು ಹೇಳಿದ್ದಾರೆ.
ಜೆಎನ್ಯು ವಿವಾದದ ಕುರಿತಂತೆ ನೇರವಾಗಿ ಉಲ್ಲೇಖಿಸದ ಭಾಗವತ್, ಕೆಲ ವಿಚ್ಚಿದ್ರಕಾರಿ ಶಕ್ತಿಗಳು ಭಾರತ್ ಮಾತಾ ಕಿ ಜೈ ಎಂದು ಹೇಳದಿರುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ, ಯುವಕರಿಗೆ ಭಾರತ್ ಮಾತಾ ಕಿ ಜೈ ಎನ್ನುವ ಘೋಷಣೆಗಳನ್ನು ಕೂಗುವಂತೆ ಹೇಳುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿಸಿದ್ದಾರೆ.