ಚುನಾವಣೆಗೆ ಟಿಕೆಟ್ ಸಿಗದ ಹಿನ್ನಲೆ; ಆತ್ಮಹತ್ಯೆಗೆ ಯತ್ನಿಸಿದ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಶಾಸಕ

ಸೋಮವಾರ, 18 ಮಾರ್ಚ್ 2019 (16:22 IST)
ಹೈದರಾಬಾದ್ : ಚುನಾವಣೆಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಶಾಸಕ, ದಲಿತ ನಾಯಕ ಎಮ್. ಸುನೀಲ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಸುನೀಲ್ ಕುಮಾರ್ ಅವರು ಆಂಧ್ರಪ್ರದೇಶದ ಪುತಲಪಟ್ಟು ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದರು. ಆದರೆ ಟಿಕೆಟ್ ನಿರಾಕರಿಸಲಾಗಿತ್ತು. ಹೀಗಾಗಿ ಅವರು ಮಣಿಕಟ್ಟು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ವಿಡಿಯೋವನ್ನು ಚಿತ್ರೀಕರಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಸದ್ಯ ಕುಮಾರ್ ಅವರನ್ನು ಮದನಪಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕಟುಂಬದ ಮೂಲಗಳು ಸ್ಪಷ್ಟಪಡಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ