ಬೆಂಗಳೂರು ಪಂದ್ಯ ರದ್ದು: ಭಾರತ-ದ.ಆಫ್ರಿಕಾ ಸರಣಿ 2-2ರಿಂದ ಸಮ

ಭಾನುವಾರ, 19 ಜೂನ್ 2022 (22:59 IST)

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 5ನೇ ಹಾಗೂ ಅಂತಿಮ ಟಿ-20 ಪಂದ್ಯ ಮಳೆಯಿಂದ ರದ್ದುಗೊಂಡಿದೆ. ಈ ಮೂಲಕ 5 ಪಂದ್ಯಗಳ ಟಿ-20 ಸರಣಿ 2-2 ಸಮಬಲದೊಂದಿಗೆ ಅಂತ್ಯಗೊಂಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ 3.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 28 ರನ್ ಗಳಿಸಿದ್ದಾಗ ಸುರಿದ ಮಳೆ ಅರ್ಧ ಗಂಟೆಯಾದರೂ ಸುರಿಯುತ್ತಲೇ ಇತ್ತು.

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡಕ್ಕೆ ಇಶಾನ್ ಕಿಶನ್ 7 ಎಸೆತಗಳಲ್ಲಿ 2 ಸಿಕ್ಸರ್ ಸೇರಿದ 15 ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ 12 ಎಸೆತಗಳಲ್ಲಿ 1 ಬೌಂಡರಿ ಒಳಗೊಂಡ 10 ರನ್ ಬಾರಿಸಿ ಇಬ್ಬರೂ ನೆಗ್ಡಿಗೆ ವಿಕೆಟ್ ಒಪ್ಪಿಸಿದರು.

ದಕ್ಷಿಣ ಆಫ್ರಿಕಾ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದರೆ, ರಿಷಭ್ ಪಂತ್ ಸಾರಥ್ಯದ ಭಾರತ ತಂಡ ನಂತರದ ಎರಡೂ ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ