ಚಾಂಪಿಯನ್ ಟ್ರೋಫಿಯಲ್ಲಿ ಭಾರತದ ಗೆಲುವು: ಕ್ಯಾನ್ಸರ್ ನಿಂದ ಬದುಕುಳಿದವರಿಗೆ ಅರ್ಪಣೆ: ಯುವರಾಜ್ ಸಿಂಗ್
ಸೋಮವಾರ, 5 ಜೂನ್ 2017 (16:19 IST)
ನವದೆಹಲಿ:ಐಸಿಸಿ ಚಾಂಪಿಯನ್ ಟ್ರೋಫಿ ಸರಣಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸಾಧಿಸಿರುವ ಭರ್ಜರಿ ಗೆಲುವನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಅರ್ಪಿಸುತ್ತೆನೆ ಎಂದು ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಹೇಳಿದ್ದಾರೆ.
ಚಾಂಪಿಯನ್ ಟ್ರೋಫಿಯಲ್ಲಿ ಭಾರತದ ಗೆಲುವು ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಯುವರಾಜ್, ಪಾಕ್ ವಿರುದ್ಧದ ಭಾರತದ ಗೆಲುವನ್ನು ಕ್ಯಾನ್ಸರ್ ವಿರುದ್ಧ ಹೋರಾಡಿ ಬದುಕುಳಿದವರಿಗೆ ಅರ್ಪಿಸುವುದಾಗಿ ತಿಳಿಸಿದ್ದಾರೆ.
ಐಸಿಸಿ ಚಾಂಪಿಯನ್ ಟ್ರೋಫಿ ಸರಣಿಯಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 124 ರನ್ ಗಳ ಅಂತರದಿಂದ ಅಮೋಘ ಜಯಸಾಧಿಸಿತ್ತು.