ಲೋಧಾ ಸಮಿತಿಯು ಬಿಸಿಸಿಐನ ಅಧ್ಯಕ್ಷ ಅನುರಾಗ್ ಠಾಕುರ್ ಮತ್ತು ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ಖುದ್ದಾಗಿ ಹಾಜರಾಗಿ ಅದರ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಚರ್ಚಿಸುವಂತೆ ಕೇಳಿದೆ. ಬಿಸಿಸಿಐ ಮೂಲಗಳ ಪ್ರಕಾರ, ಸಮಿತಿಯು ದೆಹಲಿಯಲ್ಲಿ ಆಗಸ್ಟ್ 9ರಂದು ಈ ಸಭೆ ನಡೆಸಲಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಎಲ್ಲಾ ಸುಧಾರಣೆಗಳನ್ನು ಜಾರಿಗೆ ತರುವ ಬಗ್ಗೆ ಚರ್ಚಿಸಲಿದೆ.