ಉತ್ತರ ಕಾಶ್ಮಿರದ ಉರಿ ಪಟ್ಟಣದ ಸೇನಾ ಕಚೇರಿಯ ಮೇಲೆ ನಡೆದ ಉಗ್ರರ ದಾಳಿಗೆ ಪ್ರತಿಕ್ರಿಯೆ ನೀಡಿದ ಬಾಕ್ಸರ್ ವಿಜೇಂದರ್ ಸಿಂಗ್, ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದು, ಒಂದು ವೇಳೆ ಪಾಕಿಸ್ತಾನಿಯರು ಯುದ್ಧವನ್ನು ಆಯ್ಕೆ ಮಾಡಿಕೊಂಡಲ್ಲಿ ನಾವು ಯುದ್ಧಕ್ಕೆ ಸಿದ್ದ ಎಂದು ಘೋಷಿಸಿದ್ದಾರೆ.