ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸೂಚನೆ ಕೊಟ್ಟ ನಟ ಅನಿರುದ್ಧ್

ಗುರುವಾರ, 22 ಸೆಪ್ಟಂಬರ್ 2022 (17:29 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದಿರುವ ನಟ ಅನಿರುದ್ಧ್ ಜತ್ಕಾರ್ ಈಗ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈಗಾಗಲೇ ಅನಿರುದ್ಧ್ ನಾನು ಬಿಗ್ ಬಾಸ್ ಗೆ ಹೋಗ್ತಾಯಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದರು. ಹಾಗಿದ್ದರೂ ಸೋಷಿಯಲ್ ಮೀಡಿಯಾಗಳಲ್ಲಿ ಅವರು ಬಿಗ್ ಬಾಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಇದೀಗ ಈ ಬಗ್ಗೆ ಸ್ವತಃ ಅನಿರುದ್ಧ್ ಖಡಕ್ ಸೂಚನೆ ಕೊಟ್ಟಿದ್ದಾರೆ. ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಬಿಗ್ ಬಾಸ್ ಗೆ ಹೋಗ್ತಾಯಿಲ್ಲ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ