ಜೊತೆ ಜೊತೆಯಲಿ ಧಾರವಾಹಿಗೆ ನಿರ್ದೇಶಕ ಅನೂಪ್ ಭಂಡಾರಿ?!

ಸೋಮವಾರ, 22 ಆಗಸ್ಟ್ 2022 (15:57 IST)
ಬೆಂಗಳೂರು: ನಟ ಅನಿರುದ್ಧ್ ಜತ್ಕಾರ್ ಹೊರ ಹೋದ ಬಳಿಕ ಜೊತೆ ಜೊತೆಯಲಿ ಧಾರವಾಹಿಗೆ ಹೊಸ ನಾಯಕ ಯಾರು ಎಂಬ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

ದಿನಕ್ಕೊಬ್ಬ ನಟರ ಹೆಸರು ಆರ್ಯವರ್ಧನ್ ಪಾತ್ರಕ್ಕೆ ಕೇಳಿಬರುತ್ತಿದೆ. ಇದುವರೆಗೆ ನಟ ಜೆಕೆ, ಹರೀಶ್ ರಾಜ್, ನವೀನ್ ಕೃಷ್ಣ ಸೇರಿದಂತೆ ಅನೇಕರ ಹೆಸರು ಚಾಲ್ತಿಯಲ್ಲಿದೆ.

ಆದರೆ ಈಗ ಇದಕ್ಕೆ ಮತ್ತೊಬ್ಬರ ಸೇರ್ಪಡೆಯಾಗಿದೆ. ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ ಆರ್ಯವರ್ಧನ್ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೂಪ್ ಭಂಡಾರಿಗೂ ಅನಿರುದ್ಧ್ ಗೂ ಫೇಸ್ ಲುಕ್ ಹೋಲಿಕೆ ಇದೆ. ಈ ಕಾರಣಕ್ಕೆ ಅವರು ಆರ್ಯವರ್ಧನ್ ಆಗಿ ಎಂಟ್ರಿಕೊಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಇದು ಎಷ್ಟು ಸತ್ಯ ಎಂಬುದು ಇನ್ನೂ ಗೊತ್ತಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ