ಜೊತೆ ಜೊತೆಯಲಿ ಧಾರವಾಹಿ ನಿರ್ದೇಶಕರಿಗೆ ಅನಾರೋಗ್ಯ: ವೀಕ್ಷಕರಿಗೆ ಆಘಾತ

ಸೋಮವಾರ, 20 ಜುಲೈ 2020 (10:45 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರವಾಹಿ ದಾಖಲೆಗಳನ್ನು ಮಾಡಿ ಎಲ್ಲರ ಮನ ಗೆದ್ದಿತ್ತು. ಆದರೆ ಇದೀಗ ವೀಕ್ಷಕರಿಗೆ ಬೇಸರದ ಸುದ್ದಿಯೊಂದು ಕೇಳಿಬಂದಿದೆ.
 

ನಿರ್ದೇಶಕ ಹಾಗೂ ನಿರ್ಮಾಪಕರೂ ಆಗಿರುವ ಆರೂರು ಜಗದೀಶ್ ಅನಾರೋಗ್ಯಕ್ಕೊಳಗಾಗಿದ್ದು ಕಳೆದ ಒಂದು ವಾರದಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಪತ್ನಿ ಫೇಸ್ ಬುಕ್ ಮುಖಾಂತರ ಮಾಹಿತಿ ನೀಡಿದ್ದಾರೆ. ಅವರು ಅಂಗಾಂಗಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಿನ್ನೆ ಜಗದೀಶ್ ಅವರ ಹುಟ್ಟುಹಬ್ಬವಿತ್ತು. ಈ ಕಾರಣಕ್ಕಾಗಿ ವಿಶ್ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ ಅವರ ಪತ್ನಿ ಈ ಶಾಕಿಂಗ್ ವಿಚಾರವನ್ನೂ ತಿಳಿಸಿದ್ದಾರೆ. ಈ ಬಗ್ಗೆ ಧಾರವಾಹಿ ಮೂಲಗಳನ್ನು ಪ್ರಶ್ನಿಸಿದಾಗ ಯಾರಿಗೂ ಈ ಬಗ್ಗೆ ಮಾಹಿತಿಯಿರಲಿಲ್ಲ. ಆದರೆ ಅವರು ಅನಾರೋಗ್ಯಕ್ಕೊಳಗಾಗಿದ್ದು, ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ