ಪ್ರಥಮ್ ಮಾಡಿದ ಒಂದು ಒಳ್ಳೆ ಕೆಲಸ

ಭಾನುವಾರ, 25 ಜೂನ್ 2017 (08:31 IST)
ಬೆಂಗಳೂರು: ಬಿಗ್ ಬಾಸ್ ಪ್ರಥಮ್ ಮತ್ತೆ ಸುದ್ದಿಯಲ್ಲಿದ್ದಾರೆ. ಇನ್ನೇನು ಅನಾಹುತ ಮಾಡಿಕೊಂಡು ಬಿಟ್ಟರಪ್ಪಾ ಎಂದು ಅಂದುಕೊಳ್ಳಬೇಡಿ. ಈ ಬಾರಿ ಪ್ರಥಮ್ ಒಳ್ಳೆ ಕೆಲಸಕ್ಕಾಗಿ ಸುದ್ದಿಯಲ್ಲಿದ್ದಾರೆ.

 
ಹೌದು ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ಪ್ರಥಮ್ ತಾವು ಗೆದ್ದ ಫ್ರೈಝ್ ಮನಿಯನ್ನು ರೈತರಿಗೆ ದಾನ ನೀಡುವುದಾಗಿ ಹೇಳಿದ್ದರು. ಇದೀಗ ಮತ್ತೊಮ್ಮೆ ಅವರು ನೊಂದ ಹುಡುಗಿಯೊಬ್ಬಳ ಬಾಳಿಗೆ ನೆರವಾಗಿದ್ದಾಳೆ.

ಮಗಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸಲಾಗದೆ ಗಂಗಾಧರ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಇತ್ತೀಚೆಗೆ ಭಾರೀ ಸುದ್ದಿಯಾಗಿತ್ತು. ಇದೀಗ ಪ್ರಥಮ್ ಆ ಹೆಣ್ಣು ಮಗಳ ವಿದ್ಯಾಭ್ಯಾಸಕ್ಕೆ ತಮ್ಮ ಕೈಲಾದಷ್ಟು ನೆರವು ನೀಡಿ, ಸಾಂತ್ವನ ಹೇಳಿ ಬಂದಿದ್ದಾರೆ.

ಸದ್ಯಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸಂಜು ಮತ್ತು ನಾನು’ ಧಾರವಾಹಿ ಸೇರಿದಂತೆ ಕೆಲವು ಸಿನಿಮಾಗಳಲ್ಲೂ ಬ್ಯುಸಿಯಾಗಿರುವ ಪ್ರಥಮ್ ಈ ಒಳ್ಳೆ ಕೆಲಸದಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ