ರಾಘವೇಂದ್ರ ರಾಜ್ ಕುಮಾರ್ ಜತೆ ವೀಕೆಂಡ್ ವಿತ್ ರಮೇಶ್ ಮಾಡುವುದಕ್ಕೆ ಅಪಸ್ವರ

ಬುಧವಾರ, 24 ಏಪ್ರಿಲ್ 2019 (07:20 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ರನ್ನು ಕರೆತರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.


ರಾಘವೇಂದ್ರ ರಾಜ್ ಕುಮಾರ್ ಒಂದು ದೊಡ್ಡ ಕುಟುಂಬದ ಹಿನ್ನಲೆಯಿಂದ ಬಂದವರು. ಅವರು ಹೆಚ್ಚು ಹಿಟ್ ಚಿತ್ರಗಳನ್ನೂ ನೀಡಿಲ್ಲ. ಜತೆಗೆ ಅವರು ಕಷ್ಟದಿಂದ ಮೇಲೆ ಬಂದವರಲ್ಲ. ಹೀಗಿರುವಾಗ ಅವರು ಸಾಧಕರು ಎಂದು ಹೇಗೆ ಎನಿಸಿಕೊಳ್ಳಲು ಸಾಧ್ಯ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇನ್ನು ಕೆಲವು ಅಭಿಮಾನಿಗಳು ಸಾಧಕರು ಎಂದರೆ ಕೇವಲ ಸಿನಿಮಾ ತಾರೆಯರು ಮಾತ್ರವಾ? ಉಳಿದ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಕರೆತರಬಹುದಲ್ಲವೇ? ಸುಧಾ ಮೂರ್ತಿ, ಅನಿಲ್ ಕುಂಬ್ಳೆ, ಪೊಲೀಸ್ ಅಧಿಕಾರಿ ರವಿ ಚೆನ್ನಣ್ಣನವರ್ ಮುಂತಾದ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಕರೆಸಬಹುದಿತ್ತಲ್ಲವೇ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ