ಕಿರುತೆರೆ ನಟ ಸ್ಕಂದ ಅಶೋಕ್ ಗೆ ವಂಚನೆ: ದೂರು ಕೊಟ್ಟ ನಟ

Krishnaveni K

ಶುಕ್ರವಾರ, 12 ಏಪ್ರಿಲ್ 2024 (11:53 IST)
ಬೆಂಗಳೂರು: ರಾಧಾ ರಮಣ ಧಾರವಾಹಿ ಖ್ಯಾತಿಯ ಖ್ಯಾತ ನಟ ಸ್ಕಂದ ಅಶೋಕ್ ಹೆಸರಿನಲ್ಲಿ ಹಣಕಾಸಿನ ವಂಚನೆ ಮಾಡುವ ಪ್ರಯತ್ನ ನಡೆದಿದ್ದು, ನಟ ಪೊಲೀಸರಿಗೆ ದೂರು ನೀಡಿದ್ದಾರೆ.

ಕನ್ನಡ ಕಿರುತೆರೆ ಮತ್ತು ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಅಭಿಮಾನಿ ಬಳಗವನ್ನು ಸೃಷ್ಟಿಸಿರುವ ನಟ ಸ್ಕಂದ ಅಶೋಕ್ ಹೆಸರಿನಲ್ಲಿ ಇನ್ ಸ್ಟಾಗ್ರಾಂನಲ್ಲಿ ವಂಚನೆಗೆ ಪ್ರಯತ್ನ ನಡೆದಿದೆ. ನಟನ ಇನ್ ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿ ಅವರ ಪರಿಚಯದವರಿಗೆ ಸಂದೇಶ ಕಳುಹಿಸಿ ಹಣ ನೀಡುವಂತೆ ವಂಚಕರು ಬೇಡಿಕೆಯಿಟ್ಟಿದ್ದಾರೆ.

ಇದು ಸ್ಕಂದ ಅರಿವಿಗೆ ಬಂದಿದ್ದು, ತಕ್ಷಣವೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ವಂಚಕರ ಹಿನ್ನಲೆ ಪರಿಶೀಲಿಸಿದಾಗ ಬೆಂಗಳೂರು, ಚೆನ್ನೈ ಮತ್ತು ನೈಜೀರಿಯಾ ಮೂಲ ತೋರಿಸುತ್ತಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ರೀತಿ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಖಾತೆ ಹ್ಯಾಕ್ ಮಾಡಿ ವಂಚನೆ ಮಾಡುವುದು ಇದೇ ಮೊದಲಲ್ಲ. ಹಲವು ಬಾರಿ ಅನೇಕ ತಾರೆಯರು ಈ ರೀತಿ ವಂಚನೆಗಳೊಗಾಗಿದ್ದು ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ