ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ ಕಿರುತೆರೆ ನಟಿ ಸೌಜನ್ಯ

ಗುರುವಾರ, 30 ಸೆಪ್ಟಂಬರ್ 2021 (16:49 IST)
ಬೆಂಗಳೂರು: ಕನ್ನಡ ಕಿರುತೆರೆ ಧಾರವಾಹಿಗಳಲ್ಲಿ ನಟಿಸಿದ್ದ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.


ನಟಿಯಾಗಬೇಕೆಂಬ ಮಹದಾಸೆ ಹೊತ್ತು ಕೊಡಗಿನಿಂದ ಬೆಂಗಳೂರಿಗೆ ಬಂದಿದ್ದ ಸೌಜನ್ಯಗೆ ನಿರೀಕ್ಷಿಸಿದಷ್ಟು ಅವಕಾಶ ಸಿಕ್ಕಿರಲಿಲ್ಲ. ಇದರಿಂದಾಗಿ ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ಬೆಂಗಳೂರಿನಲ್ಲಿ ಬಾಯ್ ಫ್ರೆಂಡ್ ಜೊತೆಗೆ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ಸೌಜನ್ಯ ಒಟ್ಟು ನಾಲ್ಕು ಡೆತ್ ನೋಟ್ ಬರೆದು ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದು ಸಾವನ್ನಪ್ಪಿದ್ದಾರೆ. ಇನ್ನು, ಈ ಡೆತ್ ನೋಟ್ ನಲ್ಲಿ ತನಗೆ ಕಿರುತೆರೆಯಲ್ಲಿ ಸಾಕಷ್ಟು ಅವಕಾಶ ಸಿಕ್ಕದಿರುವ ಬಗ್ಗೆ ಮತ್ತು ಮಾನಸಿಕ ಖಿನ್ನತೆಯಲ್ಲಿದ್ದ ಬಗ್ಗೆ ಬರೆದುಕೊಂಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ