‘ರಾಮಾಯಣ’ ಧಾರವಾಹಿ ಖ್ಯಾತಿಯ ರಾವಣ ಇನ್ನಿಲ್ಲ

ಬುಧವಾರ, 6 ಅಕ್ಟೋಬರ್ 2021 (10:16 IST)
ನವದೆಹಲಿ: ಕೆಲವು ವರ್ಷಗಳ ಹಿಂದೆ ದೂರದರ್ಶನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರವಾಹಿಯಲ್ಲಿ ರಾವಣ ಪಾತ್ರ ಮಾಡುತ್ತಿದ್ದ ನಟ ಅರವಿಂದ್ ತ್ರಿವೇದಿ ನಿಧನರಾಗಿದ್ದಾರೆ.


ಅವರಿಗೆ 82 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯಕ್ಕೀಡಾಗಿದ್ದರು. ಆದರೆ ಇದೀಗ ಹೃದಯಾಘಾತ ಮತ್ತು ಬಹುಅಂಗಾಂಗ ವೈಫಲ್ಯದಿಂದಾಗಿ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮೂರು ದಶಕಗಳ ಕಾಲ ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅರವಿಂದ್ ತ್ರಿವೇದಿ ಕೆಲವು ಗುಜರಾತಿ ಸಿನಿಮಾಗಳಲ್ಲೂ ನಟಿಸಿದ್ದರು. ಇತ್ತೀಚೆಗೆ ದೂರದರ್ಶನದಲ್ಲಿ ರಾಮಾಯಣ ಧಾರವಾಹಿ ಮರು ಪ್ರಸಾರವಾದಾಗ ತಮ್ಮ ನಿವಾಸದಲ್ಲಿ ವೀಕ್ಷಿಸುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ