ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ

ಶನಿವಾರ, 28 ಅಕ್ಟೋಬರ್ 2023 (11:25 IST)
ಬೆಂಗಳೂರು: ಹುಲಿ ಉಗುರಿನ ಆಭರಣ ಹೊಂದಿರುವ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಇದೀಗ ಜೈಲಿನಿಂದ ಹೊರಬಂದಿದ್ದಾರೆ.

ಸಂತೋಷ್ ಗೆ ಜಾಮೀನು ಸಿಕ್ಕಿದ್ದು, ನಿನ್ನೆಯಷ್ಟೇ ಜೈಲಿನಿಂದ ಹೊರಬಂದಿದ್ದಾರೆ. ಆದರೆ ಜೈಲಿನಿಂದ ಹೊರಬಂದ ತಕ್ಷಣ ಮಾಧ‍್ಯಮಗಳ ಕೈಗೂ ಸಿಗದೇ ವಕೀಲರ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಇದಕ್ಕೆ ಕಾರಣವೂ ಇದೆ.

ಸಂತೋಷ್ ರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ‍್ಯಾಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಲಿದ್ದಾರೆ. ಈ ಕಾರಣಕ್ಕೆ  ಬಿಗ್ ಬಾಸ್ ನಿಯಮದ ಪ್ರಕಾರ ಯಾರ ಕೈಗೂ ಸಿಗದೇ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ