ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3,000 ಕೋಟಿ ಅನುದಾನ ನೀಡಲು ಬದ್ಧ : ಬೊಮ್ಮಾಯಿ

ಭಾನುವಾರ, 3 ಅಕ್ಟೋಬರ್ 2021 (13:25 IST)
ಬಳ್ಳಾರಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಒಟ್ಟು 3000 ಕೋಟಿ ರೂ. ಅನುದಾನ ನೀಡಲು ಬದ್ದರರಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುತ್ತೇವೆ. ಪ್ರಸ್ತುತ ನೀಡುತ್ತಿರುವ 1500 ಕೋಟಿ ರೂ. ಅನುದಾನದ ಬದಲಿಗೆ, 3000 ಕೋಟಿ ಅನುದಾನ ನೀಡಲು ಬದ್ಧರಿದ್ದೇವೆ. ಹಣ ಬಿಡುಗಡೆ ಮಾಡುವುದು ತಮ್ಮ ಜವಾಬ್ದಾರಿ ಎಂದು ಅವರು ಘೋಷಿಸಿದ್ದಾರೆ.
ಅ.30ರಂದು ಸಿಂದಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ. ಅಭ್ಯರ್ಥಿಗಳ ಆಯ್ಕೆಯ ಕುರಿತಂತೆ, ಇಂದು ಸಂಜೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಹೆಸರನ್ನು ಆಯ್ಕೆ ಮಾಡಿ, ಕೇಂದ್ರೀಯ ಚುನಾವಣಾ ಸಮಿತಿಗೆ ಕಳಿಸುತ್ತೇವೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಪಟ್ಟಿ ಪ್ರಕಟಿಸುತ್ತದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ