ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ

ಮಂಗಳವಾರ, 26 ಜುಲೈ 2022 (12:25 IST)
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ.
 
2019ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು.

ಅವರಲ್ಲಿ 52 ಮಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಜುಲೈ 12ರಂದು ಆದೇಶ ಹೊರಡಿಸಲಾಗಿತ್ತು. 

ಈ ಹಿಂದೆ ಅಧ್ಯಕ್ಷ ಸ್ಥಾನ ಹೊಂದಿದ್ದ ರಘು ಕೌಟಿಲ್ಯ, ಮಣಿರಾಜ ಶೆಟ್ಟಿ, ಕೆ.ವಿ. ನಾಗರಾಜ ಮತ್ತು ರೇವಣಪ್ಪ ಕೋಳಗಿ ಅವರಿಗೆ ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರಿಗೇ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ