ಬಿಎಸ್ ವೈ ತವರಲ್ಲಿ ಗೆಲುವಿನ ಖಾತೆ ತೆರೆದ ಬಿಜೆಪಿ

ಮಂಗಳವಾರ, 15 ಮೇ 2018 (10:16 IST)
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿ ಮೊದಲ ಗೆಲುವು ದಾಖಲಿಸಿದೆ.

ತೀರ್ಥ ಹಳ್ಳಿಯಲ್ಲಿ ಹಾಲಿ ಶಾಸಕ ಕಿಮ್ಮನೆ ರತ್ನಾಕರ್ ಅವರ ಎದುರು ಬಿಜೆಪಿಯ ಅರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದಾರೆ. ಕಳೆದ ಎರಡು ಬಾರಿ ಸತತವಾಗಿ ಸೋತಿದ್ದ ಜ್ಞಾನೇಂದ್ರ ಕೊನೆಗೂ ಇದೀಗ ಗೆಲುವು ಸಾಧಿಸಲು ಯಶಸ್ವಿಯಾಗಿದ್ದಾರೆ.

ಸಾಗರದಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಹಿನ್ನಡೆ ಅನುಭವಿಸಿದರೂ, ಬಿಎಸ್ ಯಡಿಯೂರಪ್ಪ ಶಿಖಾರಿಪುರದಲ್ಲಿ, ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ