ಬೊಮ್ಮಾಯಿ ಕೊನೆಯ ಬಜೆಟ್ ಮಂಡನೆ : ನಿರೀಕ್ಷೆಗಳೇನು?

ಶುಕ್ರವಾರ, 17 ಫೆಬ್ರವರಿ 2023 (08:50 IST)
ಬೆಂಗಳೂರು : ಚುನಾವಣೆ ಸನಿಹದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಶುಕ್ರವಾರ ಮಂಡನೆಯಾಗಲಿದೆ. ವಿಧಾನಸಭೆಯಲ್ಲಿ ನಾಳೆ ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಎರಡನೇ ಬಜೆಟ್ ಮಂಡಿಸಲಿದ್ದಾರೆ.

ಚುನಾವಣೆ ಸನಿಹದಲ್ಲಿ ಇರುವುದರಿಂದ ಈ ಬಜೆಟ್ ಸಹಜವಾಗಿಯೇ ಜನಪ್ರಿಯತೆಯ ಹಳಿ ಮೇಲೆ ಸಾಗುವ ನಿರೀಕ್ಷೆ ಇದೆ.

ಉಚಿತ ಘೋಷಣೆ ಒಳಗೊಂಡಂತೆ, ಜನತೆಗೆ ತೆರಿಗೆ ಹೊರೆ ಇಲ್ಲದ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಪ್ಲಾನ್ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್-ಜೆಡಿಎಸ್ಗೆ ಟಕ್ಕರ್ ಕೊಟ್ಟು, ಮತ ಫಸಲು ತೆಗೆಯುವುದಕ್ಕೆ ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಮೂಲಕ ಪ್ರಯತ್ನಿಸಲಿದ್ದಾರೆ. 

ಬಜೆಟ್ ನಿರೀಕ್ಷೆಗಳೇನು?

ಕಾಂಗ್ರೆಸ್ನ ಗೃಹ ಲಕ್ಷ್ಮಿ ಯೋಜನೆಗೆ ಪ್ರತಿಯಾಗಿ ಸ್ತ್ರೀಶಕ್ತಿ ಯೋಜನೆ, ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯ 5 ಲಕ್ಷ ರೂ.ಗೆ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲದ ಮೊತ್ತ ಹೆಚ್ಚಳ ಸಾಧ್ಯತೆ,

ಕುಲ ಕಸುಬುಗಳ ಪ್ರೋತ್ಸಾಹಕ್ಕೆ ವಿಶೇಷ ಯೋಜನೆ, ಹೋಬಳಿ ಮಟ್ಟದಲ್ಲೂ ನಮ್ಮ ಕ್ಲಿನಿಕ್ ಅನುಷ್ಠಾನ, ಬೆಂಗಳೂರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್, ವಿವಿಧ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ;

ಅನುದಾನ, ನೀರಾವರಿ ಯೋಜನೆಗಳಿಗೆ ಹೆಚ್ಚು ಹಣ ಮೀಸಲು, ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಅನುಷ್ಠಾನ, ಪುನೀತ್ ರಾಜ್ಕುಮಾರ್, ಅಂಬರೀಶ್ ಸ್ಮಾರಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ