ಮಾಜಿ ಸಿಎಂ ಯಡಿಯೂರಪ್ಪರಿಂದ ಇಂದು ಬೈಕ್ ಯಾತ್ರೆ

ಶನಿವಾರ, 26 ಮೇ 2018 (10:30 IST)
ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಗಳ ಘಟಾನುಘಟಿ ನಾಯಕರು ಇಂದು ಪ್ರಚಾರ ,ನಡೆಸಲಿದ್ದಾರೆ.

ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಜೆಡಿಎಸ್ ಪರ ದೇವೇಗೌಡರು ರಂಗಕ್ಕಿಳಿಯಲಿದ್ದರೆ, ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಪರ ಮಾಜಿ ಸಿಎಂ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.

ಬೈಕ್ ರ್ಯಾಲಿ ಮೂಲಕ ಬಿಎಸ್ ವೈ ಇಂದು ಆರ್ ಆರ್ ನಗರದಲ್ಲಿ ಓಡಾಡಲಿದ್ದಾರೆ. ಅವರ ಜತೆಗೆ ಇತರ ಬಿಜೆಪಿ ನಾಯಕರೂ ಸಾಥ್ ಕೊಡುವ ನಿರೀಕ್ಷೆಯಿದೆ. ಬಿಜೆಪಿ ಮತ್ತು ಜೆಡಿಎಸ್ ಗೆ ಇದು ಪ್ರತಿಷ್ಠೆಯ ಕಣವಾಗಿದೆ. ಸೋಮವಾರ ಇಲ್ಲಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ